ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.
TSK
TSK · ಅಪೊಸ್ತಲರ ಕೃತ್ಯಗ 24:5
Treasury of Scripture Knowledge references in ಕನ್ನಡ IRV.
¶ ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.
ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
‹ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ›‹ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?›
ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.
ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.
ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.
ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
“ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.
ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.
ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.
ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.