TSK

TSK · ಅಪೊಸ್ತಲರ ಕೃತ್ಯಗ 26:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.

‹ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.›

ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

‹ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.›

ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.

ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.

¶ ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.

ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?