ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
TSK
TSK · ಅಪೊಸ್ತಲರ ಕೃತ್ಯಗ 26:17
Treasury of Scripture Knowledge references in ಕನ್ನಡ IRV.
ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›
ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.
ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
¶ ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;
“ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.
ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
¶ ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;
¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.
ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.