TSK

TSK · ಅಪೊಸ್ತಲರ ಕೃತ್ಯಗ 26:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.

ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.

ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.

¶ ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?

¶ ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.

ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.

ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.

ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.

ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.