ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.
TSK
TSK · ಅಪೊಸ್ತಲರ ಕೃತ್ಯಗ 26:6
Treasury of Scripture Knowledge references in ಕನ್ನಡ IRV.
ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
¶ ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
¶ ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
¶ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.
ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”
¶ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”
ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.
ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.
ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.
¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.
¶ ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.
ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.
ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
¶ ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.