ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
TSK
TSK · ಅಪೊಸ್ತಲರ ಕೃತ್ಯಗ 27:1
Treasury of Scripture Knowledge references in ಕನ್ನಡ IRV.
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
¶ ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.
ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.
¶ ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; ‹“ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು”› ಅಂದನು.
ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.
ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.
¶ ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
¶ ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.