ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.
TSK
TSK · ಅಪೊಸ್ತಲರ ಕೃತ್ಯಗ 27:18
Treasury of Scripture Knowledge references in ಕನ್ನಡ IRV.
‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›
‹ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.›
ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.
¶ ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.