TSK

TSK · ಅಪೊಸ್ತಲರ ಕೃತ್ಯಗ 27:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.

¶ ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; ‹“ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು”› ಅಂದನು.

ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.

ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.