ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
TSK
TSK · ಅಪೊಸ್ತಲರ ಕೃತ್ಯಗ 27:23
Treasury of Scripture Knowledge references in ಕನ್ನಡ IRV.
ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.
ಎನ್ನಿನಿಯನು ನನ್ನವನೇ, ನಾನು ಅವನವಳೇ, ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.
ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.
‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
¶ ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.
“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
‹ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.›
ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.
ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
¶ ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; ‹“ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು”› ಅಂದನು.
ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.
ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ
¶ ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.
¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?
¶ ‹“ಯೇಸುವೆಂಬ ನಾನು›‹ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ›‹ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು›‹ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ›‹ಅವನ ಸಂತತಿಯೂ›‹ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”›