ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.
TSK
TSK · ಅಪೊಸ್ತಲರ ಕೃತ್ಯಗ 27:35
Treasury of Scripture Knowledge references in ಕನ್ನಡ IRV.
ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.
ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.