TSK

TSK · ಅಪೊಸ್ತಲರ ಕೃತ್ಯಗ 3:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

¶ ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.

ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.

ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.

ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.

¶ ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.

ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.

¶ “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.

ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.

¶ ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.

ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.