ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;
TSK
TSK · ಅಪೊಸ್ತಲರ ಕೃತ್ಯಗ 4:11
Treasury of Scripture Knowledge references in ಕನ್ನಡ IRV.
ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
¶ “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’
ಯೇಸು ಅವರಿಗೆ, ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’›
‹“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ› ‹ಮುಖ್ಯವಾದ ಮೂಲೆಗಲ್ಲಾಯಿತು.›
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.