ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.
TSK
TSK · ಅಪೊಸ್ತಲರ ಕೃತ್ಯಗ 4:12
Treasury of Scripture Knowledge references in ಕನ್ನಡ IRV.
ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.
ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”
¶ ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.