TSK

TSK · ಅಪೊಸ್ತಲರ ಕೃತ್ಯಗ 4:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.

ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.

ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,

¶ “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.

¶ ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.

ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.

ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.

ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.

ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.

ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.