ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.
TSK
TSK · ಅಪೊಸ್ತಲರ ಕೃತ್ಯಗ 4:20
Treasury of Scripture Knowledge references in ಕನ್ನಡ IRV.
ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತರಾತ್ಮವು ನನ್ನನ್ನು ಒತ್ತಾಯಪಡಿಸುತ್ತದೆ.
ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”
ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.
¶ ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!
¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.