ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
TSK
TSK · ಅಪೊಸ್ತಲರ ಕೃತ್ಯಗ 4:21
Treasury of Scripture Knowledge references in ಕನ್ನಡ IRV.
ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.
¶ ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.