TSK

TSK · ಅಪೊಸ್ತಲರ ಕೃತ್ಯಗ 4:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.

ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.

ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.

ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.

¶ ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.

ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.

ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”

¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.