ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
TSK
TSK · ಅಪೊಸ್ತಲರ ಕೃತ್ಯಗ 4:26
Treasury of Scripture Knowledge references in ಕನ್ನಡ IRV.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
‹“ಕರ್ತನ ಆತ್ಮವು ನನ್ನ ಮೇಲೆ ಅದೆ,› ‹ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.› ‹ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,› ‹ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ› ‹ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ›
ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.
¶ ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.