ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
TSK
TSK · ಅಪೊಸ್ತಲರ ಕೃತ್ಯಗ 4:28
Treasury of Scripture Knowledge references in ಕನ್ನಡ IRV.
ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
‹ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?”› ಎಂದು ಹೇಳಿದನು.
¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.
ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.
¶ ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.
ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”