TSK

TSK · ಅಪೊಸ್ತಲರ ಕೃತ್ಯಗ 4:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.

ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು.

¶ “ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.

ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.

ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

¶ ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.

ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.

ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.

ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.

ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.