¶ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
TSK
TSK · ಅಪೊಸ್ತಲರ ಕೃತ್ಯಗ 5:13
Treasury of Scripture Knowledge references in ಕನ್ನಡ IRV.
ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು
¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
‹“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.›
ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.
ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
¶ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.