TSK

TSK · ಅಪೊಸ್ತಲರ ಕೃತ್ಯಗ 5:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,

ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.

ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.

¶ ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.

ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?

ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.

¶ ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.

ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?