TSK

TSK · ಅಪೊಸ್ತಲರ ಕೃತ್ಯಗ 5:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.

ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.

ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

¶ ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.

ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.