TSK

TSK · ಅಪೊಸ್ತಲರ ಕೃತ್ಯಗ 5:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.

ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.

¶ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.

ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.

ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.

ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.

ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ

ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.

ಯೇಸು ಅವರಿಗೆ, ‹“ನಿಮಗೆ ಸಮಾಧಾನವಾಗಲಿ”› ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.

¶ “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.

ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.

ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

¶ ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

¶ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.

ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.

ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.

ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.

ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.

ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,

¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,

¶ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.

ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.

ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,