ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.
TSK
TSK · ಅಪೊಸ್ತಲರ ಕೃತ್ಯಗ 6:10
Treasury of Scripture Knowledge references in ಕನ್ನಡ IRV.
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.
ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.
‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›
ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.
ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.