ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
TSK
TSK · ಅಪೊಸ್ತಲರ ಕೃತ್ಯಗ 6:14
Treasury of Scripture Knowledge references in ಕನ್ನಡ IRV.
‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.
ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.
¶ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.
“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;
‹ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!›
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
¶ ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.
¶ ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.
¶ ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.
¶ ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.