¶ ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.
TSK
TSK · ಅಪೊಸ್ತಲರ ಕೃತ್ಯಗ 7:23
Treasury of Scripture Knowledge references in ಕನ್ನಡ IRV.
ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
¶ ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.
ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
¶ ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.
ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು.
ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.