TSK

TSK · ಅಪೊಸ್ತಲರ ಕೃತ್ಯಗ 7:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.

ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.

ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.

ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.

¶ “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.

ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.

ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.

ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.