TSK

TSK · ಅಪೊಸ್ತಲರ ಕೃತ್ಯಗ 7:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,

¶ ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,

ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

¶ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.

ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.

ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;

‹ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ›‹‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’›

¶ “ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.

¶ “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.