TSK

TSK · ಅಪೊಸ್ತಲರ ಕೃತ್ಯಗ 7:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

¶ ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.

ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.

ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.

ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.

ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.

ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;

ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?

ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.

¶ “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.

ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.

¶ “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.