TSK

TSK · ಅಪೊಸ್ತಲರ ಕೃತ್ಯಗ 7:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು.

ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.

ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.

¶ ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.

¶ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.

¶ ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

¶ ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು.

ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.

ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.

ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.

ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,

ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,

ಅವರು ಹಾಮನ ದೇಶದವರ ಮಧ್ಯದಲ್ಲಿ, ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.

ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.

ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.

ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;

‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.