TSK

TSK · ಅಪೊಸ್ತಲರ ಕೃತ್ಯಗ 7:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.

¶ “ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;

¶ ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.

¶ ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.

ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.

ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

‹ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.›

¶ “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.

ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.

ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’

ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.

ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.