TSK

TSK · ಅಪೊಸ್ತಲರ ಕೃತ್ಯಗ 7:39

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?

¶ ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.

ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.

ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.

ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.

¶ “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?