¶ ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
TSK
TSK · ಅಪೊಸ್ತಲರ ಕೃತ್ಯಗ 7:55
Treasury of Scripture Knowledge references in ಕನ್ನಡ IRV.
ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.
ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.
¶ ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
‹ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು›‹ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.›
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.
¶ ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.
ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.
¶ ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
¶ ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, ‹“ಇಲ್ಲಿಗೆ ಏರಿ ಬಾ,›‹ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು”› ಎಂದು ಹೇಳಿತು.