TSK

TSK · ಅಪೊಸ್ತಲರ ಕೃತ್ಯಗ 8:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ” ಎಂದು ಹೇಳಿದನು.

¶ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.

¶ ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.

‹ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ›‹ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?›

‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›

“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

‹ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.›

ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.

“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.

¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.

¶ ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.

¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

¶ ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.