TSK

TSK · ಅಪೊಸ್ತಲರ ಕೃತ್ಯಗ 8:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ”› ಎಂದು ಹೇಳಿದನು.

‹ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.›

¶ ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.

¶ ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.

ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.

ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.

ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.