ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.
TSK
TSK · ಅಪೊಸ್ತಲರ ಕೃತ್ಯಗ 8:26
Treasury of Scripture Knowledge references in ಕನ್ನಡ IRV.
ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;
ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.
ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,
ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.
ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;