TSK

TSK · ಅಪೊಸ್ತಲರ ಕೃತ್ಯಗ 8:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?

ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.

ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.

ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.

ಅವರಿಗೆ, ‹“ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

¶ ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?

ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.

ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.

¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.