TSK

TSK · ಅಪೊಸ್ತಲರ ಕೃತ್ಯಗ 8:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, ‹“ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;›

‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.

ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.

¶ ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,

ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.

ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.