ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
TSK
TSK · ಆಮೋಸ 1:13
Treasury of Scripture Knowledge references in ಕನ್ನಡ IRV.
ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.
¶ ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.
ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.
¶ ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.
¶ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.
ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;
ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
¶ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
¶ ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.