¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
TSK
TSK · ಆಮೋಸ 2:4
Treasury of Scripture Knowledge references in ಕನ್ನಡ IRV.
¶ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.
¶ ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.
ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.
ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.
ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,
ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.
¶ ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
¶ ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.
ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.
ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.
¶ “ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.
ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.
ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.
ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.
ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.