ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.
TSK
TSK · ಆಮೋಸ 2:6
Treasury of Scripture Knowledge references in ಕನ್ನಡ IRV.
ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
¶ “ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,
ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.
ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.
ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ.
ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ.
ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.”