ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ
TSK
TSK · ಆಮೋಸ 3:12
Treasury of Scripture Knowledge references in ಕನ್ನಡ IRV.
ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.
ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
¶ ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.
ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.
ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.
ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.