ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?
TSK
TSK · ಆಮೋಸ 4:1
Treasury of Scripture Knowledge references in ಕನ್ನಡ IRV.
ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”
ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.
ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
¶ ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.
ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.
“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.
ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.
¶ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.
ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.
¶ ಗೊತ್ತುಮಾಡಿಕೊಳ್ಳದೆ ಯಾರಾದರಿಬ್ಬರು ಜೊತೆಯಾಗಿ ನಡೆಯುವುದುಂಟೆ?
ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.
ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!
ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.
¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?
ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.