TSK

TSK · ಆಮೋಸ 4:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.

ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?

¶ ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.

¶ ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.

ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.

ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.

ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.

ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.

ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.

¶ ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.

ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.

ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.

ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.

“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.

“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.

ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.

ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.

¶ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.