TSK

TSK · ಆಮೋಸ 4:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.

ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.

ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.

ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.

ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.

¶ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.

ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.