TSK

TSK · ಆಮೋಸ 4:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.

¶ ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.

ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,

ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.

ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.

ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.

ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.

ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.

ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.

ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.

ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.