TSK

TSK · ಆಮೋಸ 4:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.

ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.

ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.

ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

¶ ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.

ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.

“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”