TSK

TSK · ಆಮೋಸ 5:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.

ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.

ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.

ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.

ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.

ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.

ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.

ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,

ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.