¶ ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು
TSK
TSK · ಆಮೋಸ 6:1
Treasury of Scripture Knowledge references in ಕನ್ನಡ IRV.
ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.
¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.
ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”
ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.
‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.
¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?
‹“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ!› ‹ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.›
ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.